ಮಕ್ಕಳ ಸಹಯವಾಣಿ ವತಿಯಿಂದ ತೆರೆದ ಮನೆ ಕಾರ್ಯಕ್ರಮ

No comments
TOCಸೋಮವಾರಪೇಟೆ:- ಕೂಡುಮಂಗಳೂರು ಸಮೀಪದ ಹಳೆಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಹಾಯವಾಣಿ ವತಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಹಾಗೂ "ತೆರೆದ ಮನೆ" ಕಾರ್ಯಕ್ರಮ ಶುಕ್ರವಾರ ನಡೆಯಿತು.
ಕಾರ್ಯಕ್ರಮದಲ್ಲಿ ಕೂಡುಮಂಗಳೂರು  ಗ್ರಾಮಾಂತರ ಪೊಲೀಸ್ ಠಾಣೆಯ ಸತ್ಯರವರು ಮಾತನಾಡಿ ಮಕ್ಕಳಿಗೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. 
ಮಕ್ಕಳ ಸಹಾಯವಾಣಿಯ ಕಾರ್ಯಕರ್ತೆ ಕುಮಾರಿ ಬಿ,ಕೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಸ್ವಚ್ಛ ಭಾರತದ ಉದ್ದೇಶವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭ ಶಾಲಾ ಆಡಳಿತ ಮಂಡಳಿ,ಪೋಷಕರು, ಪೊಲೀಸ್ ಠಾಣಾ ಸಿಬ್ಬಂದಿಗಳು, ಸಹಾಯವಾಣಿ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು...

No comments

Post a Comment