ಅಕ್ರಮ ಕಳ್ಳಭಟ್ಟಿ ವಶ

No comments

       ಮಡಿಕೇರಿ (TIMES OF COORG):-ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು,  ಈ ಸಂದರ್ಭದಲ್ಲಿ ಆರೋಪಿ ಬಾಬು ಕೆ.ಕೆ  ಪರಾರಿಯಾಗಿದ್ದಾರೆ.
     ಕಳ್ಳಭಟ್ಟಿ ತಯಾರಿಸಿ ಮಾರಾಟಕ್ಕೆ ಸಂಗ್ರಹಿಸಿಡಲಾಗಿದ್ದ 2 ಲೀಟರ್ ಗೇರು ಹಣ್ಣಿನ ಕಳ್ಳಭಟ್ಟಿ, 45 ಲೀಟರ್ ಗೇರು ಹಣ್ಣಿನ ಪುಳಿಗಂಜಿ ವಶಕ್ಕೆ ಪಡೆಯಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದು, ಆರೋಪಿಯ ವಿರುದ್ದ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ. ಅಬಕಾರಿ ನಿರೀಕ್ಷಕರಾದ ಆರ್.ಎಂ.ಚೈತ್ರ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕ ಅನಿಲ್ ಜಿ.ಅರ್.,  ಅಬಕಾರಿ ರಕ್ಷಕರಾದ ಹಂಜûದ್ ಕೆ.ಎಸ್, ರಾಜು ಎಚ್.ಎಸ್, ಲಕ್ಷ್ಮೀದೇವಿ ಎಸ್ ಭಾಗವಹಿಸಿದ್ದರು.

No comments

Post a Comment