ಮಡಿಕೇರಿ (Times Of Coorg) : ಕೇರಳ -ಕೊಡಗು ಗಡಿಭಾಗದ ಚೆಕ್ಪೋಸ್ಟ್ನಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ರೂ, ಹಣ ಪಡದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ವಿರಾಜಪೇಟೆಯ ಮೂವರು ಪೊಲೀಸ್ ಸಿಬ್ಬಂದಿ ವಾಹನ ಚಾಲಕರ ಬಳಿ ಹಣ ಪಡೆಯುತ್ತಿದ್ದ ವೀಡಿಯೋ ವೈರಲ್ ಆಗಿತ್ತು.
ಇದೀಗ ಆ ಮೂವರು ಸಿಬ್ಬಂದಿಯನ್ನ ಅಮಾನತು ಮಾಡಿ ಎಸ್ಪಿ ಡಿ.ಪಿ ಸುಮನ್ ಆದೇಶ ಹೊರಡಿಸಿದ್ದಾರೆ. ಮಾರ್ಚ್ 25ರಂದು ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿತ್ತು. ಮೂವರಲ್ಲಿ ಒಬ್ಬರು ಎಎಸ್ಐ ಸೇರಿದಂತೆ ಇಬ್ಬರು ಸಿಬ್ಬಂದಿಯನ್ನ ಅಮಾನತು ಮಾಡಲಾಗಿದೆ.
No comments
Post a Comment