ಗ್ರಾಮೀಣ ರಸ್ತೆ ಅಭಿವೃದ್ಧಿಗೆ 20 ಕೋಟಿ ರೂ. ಬಿಡುಗಡೆಗೆ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಮನವಿ ಸಲ್ಲಿಸಿದ ಬಿ.ಎ ಹರೀಶ್

No comments

ಮಡಿಕೇರಿ (Times Of Coorg):-ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಬಿದ್ದಿರುವ ಮಳೆಯಿಂದ ರಸ್ತೆಗಳು ಪೂರ್ಣ ಹದಗೆಟ್ಟು ಜನ ಸಾಮಾನ್ಯರು ಓಡಾಡದಂತಹ ಸನ್ನಿವೇಶ ಸೃಷ್ಠಿಯಾಗಿದೆ. ಆದ್ದರಿಂದ 20 ಕೋಟಿ ರೂ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರಲ್ಲಿ ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಮನವಿ ಮಾಡಿದ್ದಾರೆ.

      ಶಾಸಕರಾದ ಕೆ.ಜಿ.ಬೋಪಯ್ಯ ಅವರ ನೇತೃತ್ವದಲ್ಲಿ ಬುಧವಾರ ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಹೊಸಮನೆ ಕವಿತಾ ಪ್ರಭಾಕರ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಆರ್.ಮಂಜುಳಾ, ಜಿ.ಪಂ.ಸದಸ್ಯರಾದ ಕಿರಣ್ ಕಾರ್ಯಪ್ಪ, ಸಿ.ಕೆ.ಬೋಪಣ್ಣ, ಎಂ.ಕೆ.ವಿಜು ಸುಬ್ರಮಣಿ, ಮೂಕೊಂಡ ಪಿ.ಸುಬ್ರಮಣಿ ಇತರರ ಉಪಸ್ಥಿತಿಯಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಮಾಡಿದರು.

ಕೆಲವು ಕಡೆಯಂತು ಬಾಳೆ ಗಿಡಗಳನ್ನು ನೆಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಪ್ರವಾಸಿಗರು ಸುಮಾರು 20 ಲಕ್ಷ ಕ್ಕೂ ಹೆಚ್ಚು ಜನ ಆಗಮಿಸುತ್ತಿದ್ದು, ಇಲ್ಲಿನ ರಸ್ತೆಗಳ ದುಸ್ಥಿತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ತುರ್ತಾಗಿ ಈ ರಸ್ತೆಗಳನ್ನು ಅಭಿವೃದ್ಧಿ ಪಡಿಸದೆ ಇದ್ದರೆ ಇನ್ನಷ್ಟು ಹಾಳಾಗಿ ಸುಗಮ ಸಂಚಾರ ಸಾಧ್ಯವಿಲ್ಲದಂತಾಗುತ್ತದೆ ಎಂದು ಬಿ.ಎ.ಹರೀಶ್ ಅವರು ಸಚಿವರ ಗಮನಕ್ಕೆ ತಂದರು.

      ಜಿ.ಪಂ.ಸದಸ್ಯರ ಮನವಿಯಂತೆ ಅತೀ ಅವಶ್ಯಕತೆ ಇರುವ ರಸ್ತೆಗಳ ಅಭಿವೃದ್ಧಿಗೆ ರೂ.20 ಕೋಟಿ ಅನುದಾನವನ್ನು ನಿಗಧಿಗೊಳಿಸಿ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರಲ್ಲಿ ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಮನವಿ ಮಾಡಿದ್ದಾರೆ.


No comments

Post a Comment