ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಪ್ಸರ್ ಕೊಡ್ಲಿಪೇಟೆ ಆಯ್ಕೆ

No comments
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಕ್ಷದ ವಿಸ್ತರಣೆ ಮತ್ತು ಸಂಘಟನಾ ಕೆಲಸಕ್ಕೆ  ಹೆಚ್ಚಿನ ಆದ್ಯತೆ ನೀಡುವ ಅಗತ್ಯತೆ ಕುರಿತು ಬಹಳ ವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಅದರ ಸಲುವಾಗಿ ರಾಷ್ಟ್ರಮಟ್ಟದಲ್ಲಿ ಪಕ್ಷದ ನಾಯಕತ್ವವನ್ನು  ಮತ್ತು ಸಂಪನ್ಮೂಲಗಳನ್ನು ಇನ್ನಷ್ಟು ಹೆಚ್ಚಿಸ ಬೇಕಾಗಿರುವುದರಿಂದ  ಕರ್ನಾಟಕ ರಾಜ್ಯದ ಅಧ್ಯಕ್ಷ ಸ್ಥಾನದಲ್ಲಿದ್ದ ಇಲಿಯಾಸ್ ಮುಹಮ್ಮದ್ ತುಂಬೆರವರನ್ನು  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದಾರೆ ಹಾಗೂ ಕರ್ನಾಟಕ ರಾಜ್ಯದ ಪ್ರಧಾನ ಕಾರ್ಯದರ್ಶಿಯಾದ  ರಿಯಾಝ್ ಪರಂಗಿಪೇಟೆ ರವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಆದುದರಿಂದ ಕರ್ನಾಟಕ ರಾಜ್ಯದಲ್ಲಿ ತೆರವು ಗೊಂಡ ಪಕ್ಷದ ಸ್ಥಾನಗಳಿಗೆ ನೂತನವಾಗಿ ಕರ್ನಾಟಕ  ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಅಫ್ಸರ್ ಕೂಡ್ಲೀಪೇಟೆ ಹಾಗೂ ಮುಜಾಹೀದ್ ಪಾಷ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಅಬ್ರಾರ್ ಆಹಮದ್ ರವರನ್ನು ಆಯ್ಕೆ ಮಾಡಲಾಯಿತು.

No comments

Post a Comment