ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ - ಎಸ್ ಡಿಪಿಐ ಕೈವಾಡವಿದೆ ಎಂದ ಬಿಜೆಪಿಗರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

No comments

ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ,ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ ಪುಂಡರ ಮೇಲೆ ಕ್ರಮ ಯಾವಾಗ..?

ರಾಜ್ಯ : ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್ - ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಗಿದ ನಂತರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಇದರ ಹಿಂದೆ ಎಸ್.ಡಿ.ಪಿ.ಐ - ಸಿ.ಎಫ್.ಐ ಇರಬಹುದೆಂಬ ಶಂಕೆ ಮೂಡಿದೆಯಂತೆ.ಇಲ್ಲಿಯ ವರೆಗೆ ಇವರ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗೃಹಸಚಿವ ಆರಗ ಜ್ಞಾನೇಂದ್ರ, ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್ - ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ. ಶಿಕ್ಷಣ ಸಚಿವರಿಗೆ ಸಿ.ಎಫ್.ಐ ಮೇಲೆ ಶಂಕೆಯಂತೆ.ಮೊದಲು ಎಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು.

ಎಸ್.ಡಿ.ಪಿ.ಐ ಯೋ, ಸಿ.ಎಫ್.ಐ ಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ. ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ?.ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯ ವರೆಗೆ ಕಾಯೋಣ.ಆದರೆ ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ,ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಇವೆಲ್ಲವೂ ಅಪರಾಧ ಹೌದಾದರೆ ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ.

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ.

ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಯಾವಾಗ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

No comments

Post a Comment