ಬಾಗಲಕೋಟೆ : ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳಿಂದ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ

No comments

ರಾಜ್ಯ : ಹಿಜಾಬ್ ವಿವಾದ ಇಂದು ಹೈಕೋರ್ಟ್ ನಲ್ಲಿ ತೀರ್ಪಿನಲ್ಲಿರುವ ಸಂಧರ್ಭ ಬಾಗಲಕೋಟೆಯ ಬನಹಟ್ಟಿ ಪದವಿ ಪೂರ್ವ ಕಾಲೇಜೊಂದರಲ್ಲಿ ಕೇಸರಿ ಶಾಲು ಧರಿಸಿ ಬಂದ ಎಬಿವಿಪಿ ಕಾರ್ಯಕರ್ತರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ನಡುವೆ ಹಿಜಾಬ್ ಕುರಿತು ವಿವಾದ ನಡೆದಿದ್ದು, ಎಬಿವಿಪಿ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದ್ದಾರೆ. ಕಾಲೇಜಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲು ಶಾಲಾಧ್ಯಪಕರು ಹರಸಾಹಸ ಪಡುವುದು ಕಂಡು ಬಂತು.

No comments

Post a Comment