ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು (web@timesofcoorg): ಸ್ಥಳಿಯ ನಾಡಕಛೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು.ಉಪವಿಭಾಗಾಧಿಕಾರಿಗಳ ಆದೇಶದಂತೆ ಮಡಿಕೇರಿ ತಾಲೂಕು ತಹಶೀಲ್ದಾರ್ ಮಹೇಶ್ ರವರ ನೇತೃತ್ವದಲ್ಲಿ ನಾಪೋಕ್ಲು ವಿಭಾಗದ ಸುಮಾರು 55 ಫಲಾನುಭಾವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ತಹಶೀಲ್ದಾರ್ ಮಹೇಶ್ 60 ವರ್ಷ ಮೇಲ್ಪಟ್ಟವರಿಗೆ, ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಸರ್ಕಾರ ಇಂತಹ ಪಿಂಚಣಿ ಸೌಲಭ್ಯವನ್ನು ನೀಡಲಾಗುತ್ತಿದ್ದು ಇದರ ಸದುಪಯೋಗವನ್ನು ಅರ್ಹರು ಪಡೆದುಕೊಳ್ಳುವಂತೆ ಕೋರಿದರು.
ಈ ಸಂದರ್ಭ ಉಪ ತಹಶೀಲ್ದಾರ್ ಸುನಿಲ್ ಕುಮಾರ್, ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗೆ ಅಮೃತ,ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments
Post a Comment