ಹಿಜಾಬ್ ವಿವಾದ : ಕೇಸರಿ ಶಾಲು ಧರಿಸಿ ಬಂದ ಶನಿವಾರಸಂತೆಯ ಕಾಲೇಜು ವಿದ್ಯಾರ್ಥಿಗಳು

No comments

 


ಶನಿವಾರಸಂತೆ : ಉಡುಪಿಯ ಹಿಜಾಬ್ ವಿವಾದ ರಾಜ್ಯಾದ್ಯಂತ ವ್ಯಾಪಿಸಿದಂತೆ ಇಂದು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಬಂದರೆ ಮಾತ್ರ ನಾವು ಕೇಸರಿ ಶಾಲು ತೆಗೆಯುತ್ತೇವೆ ಎಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶನಿವಾರಸಂತೆ ಪೋಲಿಸ್ ವೃತ್ತ ನಿರೀಕ್ಷಕ ಪರಶಿವಮೂರ್ತಿ  ವಿದ್ಯಾರ್ಥಿಗಳಿಗೆ ತಿಳಿಹೇಳಿ، ಸರ್ಕಾರದ ಆದೇಶವನ್ನು ಪಾಲಿಸುವಂತೆ ತಿಳಿಸಿದ್ದಾರೆ. ಪಟ್ಟಣದ ವಿವಿಧ ಅಂಗಡಿಗಳಲ್ಲಿ ವಿದ್ಯಾರ್ಥಿಗಳು ಇಡುತ್ತಿದ್ದ ಮೊಬೈಲ್ಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.

No comments

Post a Comment