ಭಾರತ್ ಜೋಡೋ ಐಕ್ಯತಾ ಯಾತ್ರೆಗೆ ಕೊಡಗಿನಿಂದ 5ಸಾವಿರ ಮಂದಿ : ಧರ್ಮಜ ಉತ್ತಪ್ಪ

No comments
ಸಿದ್ದಾಪುರ :- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಐಕ್ಯತಾ ಯಾತ್ರೆಗೆ ಕೊಡಗು ಜಿಲ್ಲೆಯಿಂದ ಸುಮಾರು  5ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಪತ್ರಿಕೆಗೆ ತಿಳಿಸಿದ್ದಾರೆ. ಮೈಸೂರು ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರನ್ನು  ಜಿಲ್ಲಾ ಗಡಿಭಾಗದ ಕಳಲೆ ಗ್ರಾಮದಲ್ಲಿ  ಅದ್ದೂರಿಯಾಗಿ ಸ್ವಾಗತಿಸಲು ಕೊಡಗಿನ ವಾಲಗ,ದಫ್ ಪ್ರದರ್ಶನ ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸ್ವಾಗತಿಸಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು ಈಗಾಗಲೇ 60 ಕ್ಕೂ ಹೆಚ್ಚು ಬಸ್,20ಕ್ಕೂ ಹೆಚ್ಚು ಮಿನಿ ವ್ಯಾನ್ ಸೇರೆದಂತೆ ಮುಖಂಡರುಗಳು ಹಾಗೂ ಕಾರ್ಯಕರ್ತರ ವಾಹನಗಳಲ್ಲಿ ತೆರಳಿ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

No comments

Post a Comment