ಗುಂಡ್ಲುಪೇಟೆಗೆ ಆಗಮಿಸಿದ ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಂಡ ಅಲ್ಪಸಂಖ್ಯಾತ ಘಟಕ

No comments
ಸಿದ್ದಾಪುರ :- ಗಡಿಭಾಗದ ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿಯನ್ನ ಸ್ವಾಗತಿಸಿ ಐಕ್ಯತಾ ಯಾತ್ರೆಯಲ್ಲಿ  ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಪಾಲ್ಗೊಂಡು ಗಮನ ಸೆಳೆದರು.
ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್ ಮಾತನಾಡಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ಬೃಹತ್ ಕಾಲ್ನಡಿಗೆ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯದ ನಾಯಕರುಗಳು ಪಕ್ಷ ಸಂಘಟನೆಯೊಂದಿಗೆ ಯಾತ್ರೆಯೊಂದಿಗೆ ಮುನ್ನಡೆಯುತ್ತಿರುವುದು ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದ ಅವರು 
ಇಂದಿನ ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ದೂರಮಾಡಿ ಕಾಂಗ್ರೆಸ್ ಪಕ್ಷದತ್ತ  ರಾಜ್ಯದ ಜನತೆ ಒಲವು ತೋರುತ್ತಿದ್ದಾರೆ ಎಂದರು.
 ಸಂದರ್ಭ ಹಿರಿಯ ಕಾಂಗ್ರೆಸ್ ಮುಖಂಡ ಎರ್ಮು ಹಾಜಿ ಸೇರಿದಂತೆ ಮತ್ತಿತರರು ಇದ್ದರು 

No comments

Post a Comment