ಹೊರ ರಾಜ್ಯದ ಕಾರ್ಮಿಕರ ಬಗ್ಗೆ ಎಚ್ಚೆತ್ತುಕೊಳ್ಳಲಿ :ಮೂಕೊಂಡ ವಿಜು ಸುಬ್ರಮಣಿ

No comments
newsline media 
ಸಿದ್ದಾಪುರ: ಹೋರ  ರಾಜ್ಯದ ಕಾರ್ಮಿಕರ ವಿರುದ್ಧಪೊಲೀಸರು ಹಾಗೂ ಬೆಳೆಗಾರರು ಎಚ್ಚೆತ್ತುಕೊಳ್ಳಬೇಕೆಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮುಕೊಂಡ ವಿಜು ಸುಬ್ರಮಣೆ ಮನವಿ ಮಾಡಿದ್ದಾರೆ.ದಕ್ಷಿಣ ಕೊಡಗಿನಲ್ಲಿ ನಡೆದ ಮಹಿಳೆಯ ಮೇಲೆ ಕೊಲೆಯತ್ನ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಹಲವು ಘಟನೆಗಳು ನಡೆದಿದ್ದು ಹೊರ ರಾಜ್ಯದಿಂದ ಬಂದಿರುವ ಕಾರ್ಮಿಕರಿಂದಲೇ  ಅಪರಾಧ ಪ್ರಕರಣಗಳು ದಾಖಲಾಗುತ್ತಿದೆ. ಕಾರ್ಮಿಕರ ಸಮಸ್ಯೆ ಇದೆ ಎಂಬ ಕಾರಣಕ್ಕೆ ಸೂಕ್ತ ದಾಖಲಾತಿ ಹೊಂದದ ಕಾರ್ಮಿಕರನ್ನು  ಕೆಲಸಕ್ಕೆ ಸೇರಿಸುವಕೊಳ್ಳುವ ಮುನ್ನ ಪೂರ್ಣ ಮಾಹಿತಿ ಪರಿಶೀಲಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಅಂತಹ ಕಾರ್ಮಿಕರ ಮೇಲೆ ನಿಗ ವಹಿಸಬೇಕಾಗಿದೆ. ಪೋಲಿಸ್ ಇಲಾಖೆ ಹೊರ ರಾಜ್ಯದಿಂದ ಬರುವ ಕಾರ್ಮಿಕರ ಬಗ್ಗೆ ಮಾಹಿತಿ ನೀಡಲು  ಬೆಳೆಗಾರರಲ್ಲಿ ಹಲವು ಭಾರಿ ಮನವಿ ಮಾಡಿದ್ದರು ಕೆಲವು ಬೆಳಗಾರರು   ನಿಯಮ ಪಾಲನೆ ಮಾಡದೆ ಅಸಹಾಯಕತೆ ತೋರುವುದು ಸರಿಯಲ್ಲ. ಅಂತಹ ಕಾರ್ಮಿಕರಿಂದ ದುಷ್ಕೃತ್ಯಗಳು ನಡೆಯುವ ಸಾಧ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ  ಅಸ್ಸಾಂ ಸೇರಿದಂತೆ ಹೊರ ರಾಜ್ಯಗಳಿಂದ ಬರುವ ಕಾರ್ಮಿಕರಿಂದ  ಕಳವು, ಅತ್ಯಾಚಾರ, ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದು ಬೆಳಗಾರರು  ಅಪಾಯಕಾರಿ ಸನ್ನಿವೇಶದಲ್ಲಿ ಜೀವನ ನಡೆಸುವಂತಾಗಿದೆ.ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವ ಕಾರ್ಮಿಕರು ಹೆಸರು ಬದಲಾವಣೆ ಮಾಡಿ ನಕಲಿ ದಾಖಲಾತಿಗಳನ್ನು ನೀಡಿ ಕೆಲಸಕ್ಕೆ ಸೇರಿಕೊಳ್ಳುತ್ತಿದ್ದುಅಂಥವರ ಬಗ್ಗೆ ಹೆಚ್ಚಿನ ನಿಗ ವಹಿಸಬೇಕಾಗಿದೆ ಅಪರಾಧ ಪ್ರಕರಣಗಳಲ್ಲಿ  ಭಾಗಿಯಾಗುವ ಕಾರ್ಮಿಕರ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸುವ ಮೂಲಕ ಕ್ರಮ ಕೈಗೊಳ್ಳಬೇಕೆಂದು ವಿಜು ಸುಬ್ರಮಣಿ ಒತ್ತಾಯಿಸಿದ್ದಾರೆ.


No comments

Post a Comment